ಭ್ರಷ್ಟಾಚಾರ
ನಿಗ್ರಹ
ದಳದ ಬಗ್ಗೆ
ಭ್ರಷ್ಟಾಚಾರ ನಿಗ್ರಹ ದಳವು ಒಂದು ವಿಶೇಷ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುಪ್ತ ಮಾಹಿತಿ ಸಂಗ್ರಹಿಸುವುದು, ಇತರ ಇಲಾಖೆಗಳ ವಿಜಿಲೆನ್ಸ್ ಅಧಿಕಾರಗಳೊಂದಿಗೆ ಸಮನ್ವಯತೆ ಸಾಧಿಸಿ ಸರ್ಕಾರಿ ಅಧಿಕಾರಿಗಳು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳುವುದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳ ಬಗ್ಗೆ ತನಿಖೆಯನ್ನು ಕೈಗೊಂಡು ಅಭಿಯೋಜನೆಗೆ ಒಳಪಡಿಸುವುದು ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವುದು ಇದರ ಪ್ರಮುಖ ಕರ್ತವ್ಯಗಳಾಗಿವೆ. ಎ.ಸಿ.ಬಿ ಯು ಭ್ರಷ್ಟಾಚಾರ ನಿಗ್ರಹ ಅಧಿನಿಯಮ 1988ರ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳುತ್ತದೆ. ಸಾರ್ವಜನಿಕರು, ಸರ್ಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳಿಂದ ಸಾರ್ವಜನಿಕ ಸೇವಕರ ವಿರುದ್ಧ ಬಂದ ದೂರು ಅರ್ಜಿಗಳ/ನಿಖರ ಮಾಹಿತಿ ಬಗ್ಗೆ ವಿಚಾರಣೆಯನ್ನೂ ಸಹ ನಿಗ್ರಹ ದಳವು ಮಾಡುತ್ತದೆ.
ಭ್ರಷ್ಟಾಚಾರ ನಿಗ್ರಹ ದಳವನ್ನು ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇಲೋಯು 2016 ದಿನಾಂಕ 14.03.2016ಯಲ್ಲಿ ಸೃಜಿಸಲಾಗಿದೆ. ಈ ದಳವು ನೇರವಾಗಿ ಸಿಆಸುಇ (ಡಿ.ಪಿ.ಎ.ಆರ್)ಯ ಆಡಳಿತಾತ್ಮಕ ನಿಯಂತ್ರಣದಲ್ಲಿದ್ದು, ಎಡಿಜಿಪಿ ದರ್ಜೆಯ ಹಿರಿಯ ಐಪಿಎಸ್ ಅಧಿಕಾರಿಯವರು ಭ್ರಷ್ಟಾಚಾರ ನಿಗ್ರಹ ದಳದ ನಿರ್ದೇಶಕರಾಗಿರುತ್ತಾರೆ. ಎಡಿಜಿಪಿರವರಿಗೆ ಆಡಳಿತಾತ್ಮಕ ಹಾಗೂ ಇತರ ವಿಷಯಗಳಲ್ಲಿ ಸಹಕರಿಸಲು ಐಜಿಪಿ ಹುದ್ದೆಯ ಅಧಿಕಾರಿಯವರು ಇರುತ್ತಾರೆ.
ಕೇಂದ್ರ ಸ್ಥಾನದಲ್ಲಿ ಇಬ್ಬರು ಎಸ್.ಪಿ ದರ್ಜೆಯ ಅಧಿಕಾರಿಗಳಿದ್ದು ಕ್ರಮವಾಗಿ 1] ಎಸ್.ಪಿ (ಕೇಂದ್ರ ಸ್ಥಾನ) ಹಾಗೂ 2] ಎಸ್,ಪಿ (ಆಡಳಿತ) ಎಂಬ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಭ್ರಷ್ಟಾಚಾರ ನಿಗ್ರಹ ದಳವನ್ನು ರಾಜ್ಯದಲ್ಲಿ 7 ವಲಯಗಳಾಗಿ ವಿಭಾಗಿಸಲಾಗಿದ್ದು ವಿವರ ಈ ಕೆಳಕಂಡಂತಿದೆ.
ಮತ್ತಷ್ಟು ಓದು...