ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ
Revised SPMU Recruitment Notification |
SPMU Recruitment Notification |
27th KSCZMA Meeting Notice.
ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರವನ್ನು ಭಾರತ ಸರ್ಕಾರದ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಮಂತ್ರಾಲಯವು ಪರಿಸರ (ನಿಯಂತ್ರಣ) ಕಾಯ್ದೆ 1986ರ ನಿಯಮ(3)ರ ಉಪ ನಿಯಮ(1) & (3)ರ ಅಡಿಯಲ್ಲಿ ಕರಾವಳಿ ವಲಯ ನಿರ್ವಹಣ ಅಧಿಸೂಚನೆ 2011ರಲ್ಲಿ ನಿಗಧಿಪಡಿಸಿದ ಕಾರ್ಯವನ್ನು ನಿಯಂತ್ರಿಸಲು ಮತ್ತು ನಿರ್ವಹಿಸುವ ಉದ್ದೇಶದಿಂದ ರಚಿಸಲಾಗಿದೆ. ಪ್ರಾಧಿಕಾರವು ಕರಾವಳಿ ಪರಿಸರದ ಗುಣಮಟ್ಟವನ್ನು ಸುಧಾರಿಸಲು ಮತ್ತು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶವನ್ನು ಹೊಂದಿದೆ. ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ವಲಯಗಳಲ್ಲಿ ಪರಿಸರದ ಮಾಲಿನ್ಯವನ್ನು ತಡೆಗಟ್ಟುವುದು, ತಗ್ಗಿಸುವುದು ಮತ್ತು ನಿಯಂತ್ರಿಸುವ ಉದ್ದೇಶವನ್ನು ಸಹ ಒಳಗೊಂಡಿದೆ. ಕರಾವಳಿ ನಿಯಂತ್ರಣ ವಲಯದ ವರ್ಗೀಕರಣದಲ್ಲಿ ಬದಲಾವಣೆಗಳಿಗೆ ಅಥವಾ ಬದಲಾವಣೆಗಳಿಗೆ ಪ್ರಸ್ತಾವನೆಗಳನ್ನು ಪರಿಶೀಲಿಸುವ ಹಾಗೂ ಪರಿಸರ (ನಿಯಂತ್ರಣ) ಕಾಯ್ದೆ 1986ರ ನಿಬಂಧನೆಗಳ ಉಲ್ಲಂಘನೆಯ ಪ್ರಕರಣಗಳನ್ನು ವಿಚಾರಿಸುವ ಮತ್ತು CRZ ಅಧಿಸೂಚನೆಯ 2011ರ ನಿಬಂಧನೆಗಳನ್ನು ಉಲ್ಲಂಘಿಸಿರುವ ಪ್ರಕರಣಗಳನ್ನು ಪರಿಶೀಲಿಸಲು ಪ್ರಾಧಿಕಾರಕ್ಕೆ ಅಧಿಕಾರವನ್ನು ನೀಡಲಾಗಿದೆ.
ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರದ, ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತದೆ ಹಾಗೂ ಇದರ ಕೇಂದ್ರಸ್ಥಾನವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುತ್ತದೆ. ವಿಶೇಷ ನಿರ್ದೇಶಕರು (ತಾಂತ್ರಿಕ ಶಾಖೆ), ಅರಣ್ಯ ಪರಿಸರ ಮತ್ತು ಜೀವ ಪರಿಸ್ಥಿತಿ ಇಲಾಖೆ ಇವರು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಪರಿಸರ ಹಾಗೂ ಜೀವ ಪರಿಸ್ಥಿತಿ ಇಲಾಖೆಯು ಪ್ರಾಧಿಕಾರಕ್ಕೆ ಸಚಿವಾಲಯದ ಸಹಾಯವನ್ನು ಒದಗಿಸುತ್ತದೆ. ಮೂರು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ ಜಿಲ್ಲಾ ಕರಾವಳಿ ನಿರ್ವಹಣಾ ಸಮಿತಿಗಳು ಪ್ರಾಧಿಕಾರದ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಪ್ರಾಧಿಕಾರಕ್ಕೆ ಸಹಾಯ ಮಾಡುತ್ತವೆ.